G s shivarudrappa biography channel
G s shivarudrappa biography channel schedule!
ಜಿ.ಎಸ್.ಶಿವರುದ್ರಪ್ಪ
ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ (ಫೆಬ್ರುವರಿ ೭,೧೯೨೬ - ಡಿಸೆಂಬರ್ ೨೩, ೨೦೧೩), ಜಿ. ಎಸ್.
G s shivarudrappa biography channel
ಶಿವರುದ್ರಪ್ಪ ಅಥವಾ ಜಿ.ಎಸ್.ಎಸ್ ಎಂದೇ ಪರಿಚಿತರಾದ ಕನ್ನಡದ ಕವಿ, ವಿಮರ್ಶಕ, ಸಂಶೋಧಕ, ನಾಟಕಕಾರ ಮತ್ತು ಪ್ರಾಧ್ಯಾಪಕ. ಗೋವಿಂದ ಪೈ, ಕುವೆಂಪು ನಂತರ 'ರಾಷ್ಟ್ರಕವಿ' ಗೌರವಕ್ಕೆ ಪಾತ್ರರಾದವರು. ನವೆಂಬರ್ ೧, ೨೦೦೬ ಸುವರ್ಣ ಕರ್ನಾಟಕ ರಾಜ್ಯೋತ್ಸವದಂದು ಶಿವರುದ್ರಪ್ಪನವರನ್ನು ರಾಷ್ಟ್ರಕವಿ ಎಂದು ಘೋಷಿಸಲಾಯಿತು.
ಅವರನ್ನು ಸಮನ್ವಯ ಕವಿ ಎಂದೇ ಗುರುತಿಸಲಾಗುತ್ತದೆ.
G s shivarudrappa biography channel 7
ಓದು/ವಿದ್ಯಾಭ್ಯಾಸ
[ಬದಲಾಯಿಸಿ]- ಡಾ.ಜಿ.ಎಸ್.ಶಿವರುದ್ರಪ್ಪ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ತಾಲೂಕಿನ ಈಸೂರುಗ್ರಾಮದಲ್ಲಿ ಫೆಬ್ರವರಿ ೭, ೧೯೨೬ ರಂದು ಜನಿಸಿದರು. ತಂದೆ ಶಾಂತವೀರಪ್ಪ ಅಲ್ಲಿನ ಮಾಧ್ಯಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದರು. ತಾಯಿ ವೀರಮ್ಮ.
- ತಂದೆಯಿಂದ ಸಾಹಿತ್ಯದ ಗೀಳು ಹತ್ತಿಸಿಕೊಂಡ ಶಿವರುದ್ರಪ್ಪನವರು ಹೊನ್ನಾಳಿ, ಕೋಟೆಹಾಳಗಳಲ್ಲಿ ಪ್ರಾಥಮಿಕ ಶಿಕ್ಷಣವನ್ನು, ರಾಮಗಿರಿ, ಬೆಲಗೂರಲ್ಲಿ ಮಾಧ್ಯಮಿಕ ಶಿಕ್ಷಣವನ್ನು, ದಾವಣಗೆರೆ, ತುಮಕೂರುಗಳಲ್ಲಿ ಪ್ರೌಢಶಾಲಾ, ಇಂಟರ್ ಮೀಡಿಯಟ್ ಶಿಕ್ಷಣವನ್ನೂ ಮುಗಿಸಿದರು.
ಮೈಸೂರು ವಿಶ್ವವಿದ್ಯಾನಿಲಯದ ಮಹಾರಾಜ ಕಾಲೇಜಿನಲ್ಲಿ ಬಿ.ಎ.
G s shivarudrappa information in kannada
ಆನರ್ಸ್ (೧೯೪೯) ಪದವಿ ಪಡೆದರು.
- ಕೆಲಕಾಲ ದಾವಣಗೆರೆಯ ಡಿ.ಆರ್.ಎಮ್. ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿದ್ದು ನಂತರ ಎಂ.ಎ. (೧೯೫೩) ಪ್ರಥಮ ದರ್ಜೆಯಲ